H D KumaraswamyOvjeren akaunt

@hd_kumaraswamy

ಹೆಮ್ಮೆಯ ಕನ್ನಡಿಗ | Former Chief Minister of Karnataka

Vrijeme pridruživanja: srpanj 2014.

Tweetovi

Blokirali ste korisnika/cu @hd_kumaraswamy

Jeste li sigurni da želite vidjeti te tweetove? Time nećete deblokirati korisnika/cu @hd_kumaraswamy

  1. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಿ 2020-21 ಸಾಲಿನ ಆಯವ್ಯಯದಲ್ಲಿ ಸೂಕ್ತ ವೇತನ ಸವಲತ್ತುಗಳನ್ನು ಘೋಷಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ.

    Poništi
  2. ಗ್ರಾಮೀಣ ಕನ್ನಡದಲ್ಲಿ ಹೊಳೆಯುವ ಪದಾರ್ಥಕ್ಕೆ ಮಿಣಿಮಿಣಿ ಎನ್ನಲಾಗುತ್ತದೆ. ಅದು ಶುದ್ಧ ಕನ್ನಡ, ಗ್ರಾಮೀಣ ಪದ. ಅದನ್ನೇ ಅಪಮಾನಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರೆ ಅದು ಕನ್ನಡಕ್ಕೆ, ಗ್ರಾಮೀಣ ಕರ್ನಾಟಕಕ್ಕೆ ಮಾಡಿದ ಅಪಮಾನ. ಎಷ್ಟೇ ಆಗಲಿ ಬಿಜೆಪಿಗರ ಜೀನ್ ಪಾಕಿಸ್ತಾನದ್ದಲ್ಲವೇ. ಅದಕ್ಕೇ ಅವರಿಗೆ ಕನ್ನಡದ ಪದಗಳು ತಾತ್ಸಾರ. 4/4

    Poništi
  3. ನಾನು ಸುಳ್ಳಾಡಿಲ್ಲ, ನಿಂದನಾತ್ಮಕ ಪದ ಬಳಸಿಲ್ಲ‌. ಪತ್ರಿಕೆಯೊಂದರ ವರದಿ ಓದಿ ಸತ್ಯ ಮಾತಾಡಿದ್ದೇನೆ. ಆದಿತ್ಯ 'ರಾವ್' ಎಂಬ ಉಗ್ರನ ರಕ್ಷಣೆಗೆ ನಿಂತಿರುವ ಬಿಜೆಪಿ ನನ್ನ ಸತ್ಯದ ಮಾತನ್ನೇ ಗೇಲಿ‌ ಮಾಡುತ್ತಿದೆ. ಬಿಜೆಪಿ ಸತ್ಯ, ಧರ್ಮಗಳ ವಿರೋಧಿ. 3/4

    Poništi
  4. ನಾನು ಹಿಂದೆಯೇ ಹೇಳಿದಂತೆ, ಪಾಕಿಸ್ತಾನ, ನಾಜಿ ಜೀನ್ ಹೊಂದಿರುವ ಬಿಜೆಪಿಗೆ ಕನ್ನಡದ ಮೂಲ ನಿವಾಸಿ ಸಮುದಾಯದ ನಾಯಕರನ್ನು ಕಂಡರೆ ಉರಿ. ಅದಕ್ಕೇ ಈ ಮಣ್ಣಿನ ಮೂಲ ನಿವಾಸಿ ಸಮುದಾಯದ ಪ್ರತಿನಿಧಿಯಾದ ನನ್ನನ್ನು ಹಣಿಯಲು ಪ್ರಯತ್ನಿಸುತ್ತಿದೆ. ಎದುರಲ್ಲಿ‌ ನಿಂತು ಹೋರಾಡಲಾಗದೇ ಗೇಲಿ ಮೂಲಕ ಹಣಿಯಲು ನಿಂತಿದೆ ಬಿಜೆಪಿ. 2/4

    Poništi
  5. ದೇಶದಲ್ಲಿ ಇಂದು ನಡೆಯುತ್ತಿರುವುದು ಕುಟಿಲ ರಾಜಕಾರಣ. ಅದರ ಭಾಗವೇ ಕೊಂಕು, ಟ್ರೋಲ್ಗಳು. ಒಬ್ಬ ನಾಯಕನ ವಿರುದ್ಧ ಎದುರು ನಿಂತು ಹೋರಾಡಲಾಗದ ಹೇಡಿಗಳು ಗೇಲಿ, ಅಪಹಾಸ್ಯದ ತಂತ್ರದ ಮೂಲಕ ನಾಯಕನ‌ ಹನನಕ್ಕೆ ನಿಲ್ಲುತ್ತಾರೆ. ಮಿಣಿ ಮಿಣಿ ಎಂಬ ಶಬ್ಧ ಇಟ್ಟುಕೊಂಡು ಬಿಜೆಪಿ‌ ಮಾಡುತ್ತಿರುವುದು ಅದೇ ಹೇಡಿಗಳ ಕೆಲಸ‌. 1/4

    Poništi
  6. ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ.ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ‌ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ

    Poništi
  7. ತನ್ನ ಧರ್ಮ, ಸಮಾಜದ ಬಗ್ಗೆ ಅಪಾರ ಗೌರವ ಇಟ್ಟುಕೊಂಡೂ ಇತರ ಧರ್ಮ, ಸಮಾಜಗಳ ಮೇಲೆ ಅಷ್ಟೇ ಗೌರವ ಹೊಂದುವುದು ನಾನು ನಂಬಿದ ಜಾತ್ಯತೀತತೆ. ಇದರಲ್ಲಿ ಒಕ್ಕಲಿಗ ಅಸ್ಮಿತೆಯೂ ಇದೆ, ಇತರ ಸಮಾಜದ ಮೇಲಿನ ಗೌರವವೂ ಇದೆ. ನಿತ್ಯ ಅನ್ಯಧರ್ಮಗಳ‌ ಮೇಲೆ ದಾಳಿ ಮಾಡುವ, ಜಾತಿಗಳನ್ನು ಮತಕ್ಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದವರಿಂದ ಪಾಠ ಹೇಳಿಸಿಕೊಳ್ಳಬೇಕಿಲ್ಲ. 5/5

    Poništi
  8. ಒಕ್ಕಲಿಗರ ಜೀನ್ ಕರ್ನಾಟಕದ ಮಣ್ಣಿನಲ್ಲಿದೆ ಎಂದು ಹೇಳಿದರೆ ಆಶ್ವತ್ಥ ನಾರಾಯಣ + ಬಿಜೆಪಿಗೆ ಏಕೆ ಕಣ್ಣು ಉರಿ? ನಿಮ್ಮ ಜೀನ್ ಪಾಕಿಸ್ತಾನದಲ್ಲಿದೆ ಎಂಬ ಮರುಕವೇ? ನಿಮ್ಮ ಸಿದ್ಧಾಂತ ಪ್ರತಿಪಾದಕರ ಜೀನ್ 'ನಾಜಿ' ಮೂಲದ್ದು ಎಂಬ ಬೇಸರವೇ? ಈ ಮಣ್ಣಿನವರಾದ 'ನಾವು' ನಮ್ಮ ಅಸ್ಮಿತೆ ಬಗ್ಗೆ ಮಾತಾಡುತ್ತೇವೆ. ತಡೆಯಲು ಬಿಜೆಪಿಗೆ ಸಾಧ್ಯವೇ? 4/5

    Poništi
  9. ಒಕ್ಕಲಿಗರು ಅಧಿಕಾರಕ್ಕೆ ಬರುವುದನ್ನು, ಹೋರಾಟ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ. ಒಕ್ಕಲಿಗ ನಾಯಕತ್ವವನ್ನು ಅಭದ್ರಗೊಳಿಸುವ ಪ್ರಯತ್ನ ಮಾಡುವ ಬಿಜೆಪಿ‌ 'ಪಾಕಿಸ್ತಾನಿ' ಎನ್ನುವ ಮೂಲಕ ಒಕ್ಕಲಿಗ ಸಮುದಾಯಕ್ಕೆ ಮಾಡಿದ್ದ ಅಪಮಾನವನ್ನು ಉಲ್ಲೇಖಿಸಿದ್ದೆ. ಒಕ್ಕಲಿಗರ ಜೀನ್ ಈ ಮಣ್ಣಿನಲ್ಲಿದೆ ಎಂಬುದನ್ನು ತಿಳಿಸಿದ್ದೆ ಅಷ್ಟೇ. 3/5

    Poništi
  10. ಬಿಜೆಪಿ ನಾಯಕರೇ... ನಾನು ಒಕ್ಕಲಿಗ ಅಸ್ಮಿತೆಯ ಬಗ್ಗೆ ಮಾತನಾಡಿದ್ದೇನೆ. ಬಿಎಸ್ವೈ ಅವರಂತೆ ಚುನಾವಣಾ ವೇದಿಕೆಯಲ್ಲಿ‌ ನಿಂತು 'ನನ್ನ ಜಾತಿಯ ಒಂದು‌ ವೋಟೂ ಬೇರೆ ಪಕ್ಷಕ್ಕೆ ಹೋಗಬಾರದು' ಎಂದು ಆಜ್ಞೆ ಮಾಡಿಲ್ಲವಲ್ಲ? ಮತಕ್ಕಾಗಿ ಜಾತಿಯನ್ನು ದುಡಿಸಿಕೊಂಡವರು ಬಿಎಸ್ವೈ. ಅಧಿಕಾರಕ್ಕಾಗಿ ಧರ್ಮಗಳನ್ನು ಒಡೆದವರು ಮೋದಿ. ನಾನಲ್ಲ. 2/5

    Poništi
  11. 'ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು. ಸಮಾಜವನ್ನು ಒಡೆಯುವ, ಕೆಲಸವನ್ನು ಎಚ್ಡಿಕೆ ಮಾಡುತ್ತಿದ್ದಾರೆ' ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ. ಒಂದು ಸಮುದಾಯದ ನಾಯಕನನ್ನು ಟೀಕಿಸಲು ಅದೇ ಸಮುದಾಯದ ವ್ಯಕ್ತಿಯನ್ನು ಬಳಸಿಕೊಳ್ಳುವುದು ಬಿಜೆಪಿಯ ಸೋಂಕು. 1/5

    Poništi
  12. ಭಾರತೀಯ ಪ್ರಜಾಪ್ರಭುತ್ವದ ಆತ್ಮ ಸಂವಿಧಾನ ಜಾರಿಗೆ ಬಂದ ದಿನವಿದು. ಎಲ್ಲರನ್ನೂ ಸಮಾನರೆಂದು ನೋಡುವ, ಸಮಾನ ಅವಕಾಶ ನೀಡುವ ಸಂವಿಧಾನದ ಆಶಯಗಳನ್ನೇ ಬಳಸಿಕೊಂಡು ಅಧಿಕಾರಕ್ಕೆ ಬಂದ ಶಕ್ತಿಗಳು ಇಂದು ಅದರ ಆತ್ಮಕ್ಕೇ ಕೈ ಹಾಕಿ ಕೊಲ್ಲುವ ಮಟ್ಟಕ್ಕಿಳಿದಿವೆ. ಈ ಮೂಲಕ ಶಾಶ್ವತ ಅಧಿಕಾರ ರಕ್ಷಣೆಗೆ ಮುಂದಾಗಿವೆ. ಇದರ ವಿರುದ್ಧ ಹೋರಾಡುವ ಪಣ ನಮ್ಮದಾಗಲಿ.

    Prikaži ovu nit
    Poništi
  13. ಪ್ರಮಾಣ ವಚನದಲ್ಲಿ ಹಸಿರು ಶಾಲು ಹೊದ್ದು ಹಲ್ಲು‌ ಕಿರಿದರೆ ಸಾಲದು, ಕಿಸಾನ್ ಸಮ್ಮಾನ್ ಎಂಬ ಹೆಸರಲ್ಲಿ ಪ್ರಧಾನಿ ಬೂಟಾಟಿಕೆ ಮಾಡಿದರೆ ಆಗದು. ಕೇಂದ್ರ ಸರ್ಕಾರ ಕೂಡಲೇ ರೈತರ ಬೆಳೆ-ಒಡವೆ ಸಾಲದ ಬಡ್ಡಿಯ ಮೇಲಿನ ಸಬ್ಸಿಡಿ‌ ಬಿಡುಗಡೆ ಮಾಡಬೇಕು.ಇಲ್ಲವೇ ರಾಜ್ಯವೇ ಅದನ್ನು‌ ಭರಿಸಬೇಕು. ಇಲ್ಲದಿದ್ದರೆ ಬಿಜೆಪಿ ರೈತ ವಿರೋಧಿ ಎಂಬುದನ್ನು ಒಪ್ಪಬೇಕು. 3/3

    Prikaži ovu nit
    Poništi
  14. ರೈತರ ಬೆಳೆ ಮತ್ತು ಒಡವೆ ಸಾಲಗಳ ಬಡ್ಡಿಗೆ ನೀಡಬೇಕಾದ ಸಬ್ಸಿಡಿಯನ್ನು‌ ನಿಲ್ಲಿಸಿರುವ ಸರ್ಕಾರ ರೈತರನ್ನು ಲೇವಾದೇವಿದಾರರಿಗೆ ಶರಣಾಗುವಂತೆ ಮಾಡಿದೆ. ಇನ್ನೊಂದೆಡೆ ಬ್ಯಾಂಕ್ಗಳಲ್ಲಿರುವ ಬಡವರ ಚಿನ್ನವನ್ನು ಹರಾಜಿನ‌ ಮೂಲಕ‌ ಕೇಂದ್ರ ಸರ್ಕಾರ ಲಪಟಾಯಿಸುತ್ತಿದೆ. 2/3

    Prikaži ovu nit
    Poništi
  15. ನಾನು ಸಿಎಂ ಆಗಿದ್ದಾಗ ರೈತರ ಸಾಲ‌ಮನ್ನಾ ಬಗ್ಗೆ ಬಿಜೆಪಿ‌ ಅನುದಿನವೂ ಕಿತಾಪತಿ ಮಾಡಿತು‌‌. ಸಾಲಮನ್ನಾ ಆಗಿಲ್ಲ‌ ಎಂದು ಭಾಷಣವೀರ ಮೋದಿ‌ ಕೂಡ ಹೇಳಿದ್ದರು. ಆದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ರೈತರ ಬೆಳೆ-ಒಡವೆ ಸಾಲದ ಬಡ್ಡಿ‌ ಮೇಲಿನ ಸಬ್ಸಿಡಿಗೆ ಮಣ್ಣು ಹಾಕಿದೆ. 1/3

    Prikaži ovu nit
    Poništi
  16. ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಹಿಂದ್.

    Prikaži ovu nit
    Poništi
  17. ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು. 6/6

    Poništi
  18. "ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು" ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು. 5/6

    Poništi
  19. ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ. 4/6

    Poništi
  20. ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ. 3/6

    Poništi

Čini se da učitavanje traje već neko vrijeme.

Twitter je možda preopterećen ili ima kratkotrajnih poteškoća u radu. Pokušajte ponovno ili potražite dodatne informacije u odjeljku Status Twittera.

    Možda bi vam se svidjelo i ovo:

    ·